28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನಲ್ಲೆಯಲ್ಲಿ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಸ್ಕೂಟರ್ ಹಾಗೂ ಟಾಟಾ ಏಸ್ ವಾಹನವನ್ನೂ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಪ್ಪಿಸಿಕೊಂಡ ಆರೋಪಿ ಕಳಿಯ ಗ್ರಾಮದ ನಿವಾಸಿ ಹಂಝ ಸುಣ್ಣಲಡ್ಡ ಹಾಗೂ ಟಾಟಾ ಏಸ್ ಚಾಲಕ ಮಧು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಟಾ ಏಸ್‌ ವಾಹನದ ಒಳಗಡೆ ಸುಮಾರು ರೂ 10,000/- ಬೆಲೆ ಬಾಳುವ ನಸು ಹಳದಿ ಬಣ್ಣದ ದನಗಳು-02 ಮತ್ತು ಸುಮಾರು ರೂ 5,000/- ಬೆಲೆ ಬಾಳುವ ಕಪ್ಪು ಬಣ್ಣದ ದನ – 01 ಇದ್ದು, ಇವುಗಳ ಒಟ್ಟು ಅಂದಾಜು ಮೌಲ್ಯ ರೂ 15,000/- ಆಗಬಹುದು. ಸ್ವಾಧೀನಪಡಿಸಿದ ವಾಹನದ ಅಂದಾಜು ಬೆಲೆ ರೂ 1,50,000/- ಮತ್ತು ಜಾನುವಾರು ಸಾಗಾಟದ ಸಮಯ ಎ ಸ್ಕಾರ್ಟ್ ಮಾಡಿದ ಟಿವಿಎಸ್ ಜುಪಿಟರ್ ಸ್ಕೂಟರಿನ ಅಂದಾಜು ಮೌಲ್ಯ ರೂ 50,000/- ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣಾ ಅ.ಕ್ರ ನಂ 47 /2024 ಕಲಂ: 4, 5, 7, 12 ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ ಮತ್ತು ಕಲಂ: 11 ಡಿ ಪ್ರಾಣಿ ಹಿಂಸೆ ತಡೆ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!