25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ ಸಲಹೆ-ಸೂಚನೆ, ಮಾಗ೯ದರ್ಶನ ಹಾಗೂ ಪಾಲ್ಗೊಳ್ಳುವಿಕೆಯಲ್ಲಿ ಕುಂಟೆಬಿಲ್ಲೆ, ಲಗೋರಿ, ಟೋಪಿ ಬೇಕಾ ಟೋಪಿ, ಸೊಪ್ಪಾಟ, ಕಲ್ಲಾಟ, ಪಗಡೆಯಾಟ, ಅಡಿಕೆ ಹಾಳೆಯಲ್ಲಿ ಕುಳಿತು ಎಳೆಯುವುದು, ಚೆನ್ನೆಮಣೆ ಆಟಗಳು, ತೆಂಗಿನ ಮರದ ಎಲೆಗಳಿಂದ ವಾಚು, ಕನ್ನಡಕ, ಹಾವು, ಗಿರಗಿಟ್ಟೆ ಮಾಡಲಾಯಿತು. ವಿದ್ಯಾರ್ಥಿಗಳು ಆಟದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡರು.

ಬೇಸಿಗೆ ಶಿಬಿರದ 3ನೇ ದಿನ ಸೀರೆಯ ಸೆರಗಿಗೆ ಗೊಂಡೆ ಹಾಕುವುದು. ಇದರ ಬಗ್ಗೆ ಆಶಾ ಕಾರ್ಯಕರ್ತೆಯಾದ ಶ್ರೀಮತಿ ಸರೋಜಿನಿಯವರು ತರಬೇತಿಯನ್ನು ನೀಡಿದರು. ಹಾಗೂ ಮುರಳಿ ಬ್ರದರ್ಸ್ ಡಾನ್ಸ್ ತಂಡದವರು ನೃತ್ಯ ತರಬೇತಿಯನ್ನು ನೀಡಿದರು.

ಶಿಬಿರದ 4ನೇ ದಿನ ಚಿತ್ರಕಲೆ ತರಬೇತಿಯನ್ನು ಶಾಲಾ ಹಳೆ ವಿದ್ಯಾರ್ಥಿಯಾದ ಸಂತೋಷ್ ಗೋಖಲೆಯವರು ನೀಡಿದರು. ಶಾಲಾ ಶಿಕ್ಷಕಿ ಕುಮಾರಿ ಲೋಲಾಕ್ಷಿ ಯವರು ತುಳು ಲಿಪಿಯನ್ನು ಕಲಿಸಿಕೊಟ್ಟರು. ಮತ್ತು ಹಳೇ ಬಟ್ಟೆಗಳಿಂದ ಕಾಲು ಒರೆಸುವ ಮ್ಯಾಟ್ ತಯಾರಿಸಲು ವಿದ್ಯಾರ್ಥಿಗಳಿಗೆ ಶ್ರೀಮತಿ ಸರೋಜಿನಿಯವರು ಕಲಿಸಿಕೊಟ್ಟರು. ಎಲ್ಲಾ ವಿದ್ಯಾರ್ಥಿಗಳು ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!