March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಗುತ್ತಿಗಾರು ಫಾ. ಆದರ್ಶ್ ಜೋಸೆಫ್ ರವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya
error: Content is protected !!