25.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಪುದುವೆಟ್ಟು : ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡ ರವರ ವಹಿಸಿ ಮಾತನಾಡಿ ಈ ವರ್ಷದ ಬೇಸಿಗೆ ಶಿಬಿರ ಅತ್ಯಂತ ಯಶಸ್ವಿಯಾಗಿ ಮುಗಿದಿದೆ ಶಾಲೆಯ ಎಲ್ಲಾ ಮಕ್ಕಳು ಹಾಗೂ ಶಿಕ್ಷಕ ವೃಂದದವರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ, ಬೇಸಿಗೆ ಶಿಬಿರದಲ್ಲಿ ಕಲಿತಂತಹ ವಿಷಯಗಳನ್ನು ಮಕ್ಕಳು ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಸಮಾರೋಪ ಸಮಾರಂಭದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ವಿಜಯಲಕ್ಷ್ಮಿ ಅವರು ವಹಿಸಿ ಮಾತನಾಡಿ ಪ್ರಾಥಮಿಕ ಶಾಲೆಯ ಮಕ್ಕಳು ಮುಗ್ಧ ಮನಸ್ಸಿನ ಮಕ್ಕಳು ಈ ಮಕ್ಕಳಿಗೆ ಒಳ್ಳೆಯ ವಿಷಯವನ್ನು ನಾವು ತಿಳಿಸಿದಾಗ ಮುಂದಿನ ದಿನಗಳಲ್ಲಿ ಆ ಮಕ್ಕಳು ದೇಶಕ್ಕೆ ಉತ್ತಮ ಪ್ರಜೆಯಾಗುತ್ತಾರೆ ಎಂದು ತಿಳಿಸಿದರು.


ಮೂರನೇ ದಿನದ ಬೇಸಿಗೆ ಶಿಬಿರದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಅವರು ಮಕ್ಕಳಿಗೆ ಅಭಿನಯ ಗೀತೆ ಹಾಡುಗಾರಿಕೆಯ ಬಗ್ಗೆ ತರಬೇತಿಯನ್ನು ನೀಡಿದರು.


ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು. ಶ್ರೀಮತಿ ಶೀಲಾ ಯನ್ ಧನ್ಯವಾದವಿತ್ತರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಸರಕಾರಿ ಪ್ರೌಢಶಾಲೆ ನಡದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರ ಸಭೆ:ಪೋಷಕರೇ ತಮ್ಮ ಮಕ್ಕಳಿಗೆ ಶಿಕ್ಷಕರಾಗಿ ಬೋಧನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕನ್ಯಾಡಿII ಸ.ಉ.ಹಿ.ಪ್ರಾ. ಶಾಲೆಗೆ ಪೆಟ್ರೋನೆಟ್ ಎಂ.ಹೆಚ್.ಬಿ ಲಿಮಿಟೆಡ್ ಕಂಪನಿಯಿಂದ ಕಂಪ್ಯೂಟರ್ ಮತ್ತು ಕಂಪ್ಯೂಟರ್ ಟೇಬಲ್ ಕೊಡುಗೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya
error: Content is protected !!