25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ ಸಲಹೆ-ಸೂಚನೆ, ಮಾಗ೯ದರ್ಶನ ಹಾಗೂ ಪಾಲ್ಗೊಳ್ಳುವಿಕೆಯಲ್ಲಿ ಕುಂಟೆಬಿಲ್ಲೆ, ಲಗೋರಿ, ಟೋಪಿ ಬೇಕಾ ಟೋಪಿ, ಸೊಪ್ಪಾಟ, ಕಲ್ಲಾಟ, ಪಗಡೆಯಾಟ, ಅಡಿಕೆ ಹಾಳೆಯಲ್ಲಿ ಕುಳಿತು ಎಳೆಯುವುದು, ಚೆನ್ನೆಮಣೆ ಆಟಗಳು, ತೆಂಗಿನ ಮರದ ಎಲೆಗಳಿಂದ ವಾಚು, ಕನ್ನಡಕ, ಹಾವು, ಗಿರಗಿಟ್ಟೆ ಮಾಡಲಾಯಿತು. ವಿದ್ಯಾರ್ಥಿಗಳು ಆಟದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡರು.

ಬೇಸಿಗೆ ಶಿಬಿರದ 3ನೇ ದಿನ ಸೀರೆಯ ಸೆರಗಿಗೆ ಗೊಂಡೆ ಹಾಕುವುದು. ಇದರ ಬಗ್ಗೆ ಆಶಾ ಕಾರ್ಯಕರ್ತೆಯಾದ ಶ್ರೀಮತಿ ಸರೋಜಿನಿಯವರು ತರಬೇತಿಯನ್ನು ನೀಡಿದರು. ಹಾಗೂ ಮುರಳಿ ಬ್ರದರ್ಸ್ ಡಾನ್ಸ್ ತಂಡದವರು ನೃತ್ಯ ತರಬೇತಿಯನ್ನು ನೀಡಿದರು.

ಶಿಬಿರದ 4ನೇ ದಿನ ಚಿತ್ರಕಲೆ ತರಬೇತಿಯನ್ನು ಶಾಲಾ ಹಳೆ ವಿದ್ಯಾರ್ಥಿಯಾದ ಸಂತೋಷ್ ಗೋಖಲೆಯವರು ನೀಡಿದರು. ಶಾಲಾ ಶಿಕ್ಷಕಿ ಕುಮಾರಿ ಲೋಲಾಕ್ಷಿ ಯವರು ತುಳು ಲಿಪಿಯನ್ನು ಕಲಿಸಿಕೊಟ್ಟರು. ಮತ್ತು ಹಳೇ ಬಟ್ಟೆಗಳಿಂದ ಕಾಲು ಒರೆಸುವ ಮ್ಯಾಟ್ ತಯಾರಿಸಲು ವಿದ್ಯಾರ್ಥಿಗಳಿಗೆ ಶ್ರೀಮತಿ ಸರೋಜಿನಿಯವರು ಕಲಿಸಿಕೊಟ್ಟರು. ಎಲ್ಲಾ ವಿದ್ಯಾರ್ಥಿಗಳು ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!