22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ ಸಲಹೆ-ಸೂಚನೆ, ಮಾಗ೯ದರ್ಶನ ಹಾಗೂ ಪಾಲ್ಗೊಳ್ಳುವಿಕೆಯಲ್ಲಿ ಕುಂಟೆಬಿಲ್ಲೆ, ಲಗೋರಿ, ಟೋಪಿ ಬೇಕಾ ಟೋಪಿ, ಸೊಪ್ಪಾಟ, ಕಲ್ಲಾಟ, ಪಗಡೆಯಾಟ, ಅಡಿಕೆ ಹಾಳೆಯಲ್ಲಿ ಕುಳಿತು ಎಳೆಯುವುದು, ಚೆನ್ನೆಮಣೆ ಆಟಗಳು, ತೆಂಗಿನ ಮರದ ಎಲೆಗಳಿಂದ ವಾಚು, ಕನ್ನಡಕ, ಹಾವು, ಗಿರಗಿಟ್ಟೆ ಮಾಡಲಾಯಿತು. ವಿದ್ಯಾರ್ಥಿಗಳು ಆಟದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡರು.

ಬೇಸಿಗೆ ಶಿಬಿರದ 3ನೇ ದಿನ ಸೀರೆಯ ಸೆರಗಿಗೆ ಗೊಂಡೆ ಹಾಕುವುದು. ಇದರ ಬಗ್ಗೆ ಆಶಾ ಕಾರ್ಯಕರ್ತೆಯಾದ ಶ್ರೀಮತಿ ಸರೋಜಿನಿಯವರು ತರಬೇತಿಯನ್ನು ನೀಡಿದರು. ಹಾಗೂ ಮುರಳಿ ಬ್ರದರ್ಸ್ ಡಾನ್ಸ್ ತಂಡದವರು ನೃತ್ಯ ತರಬೇತಿಯನ್ನು ನೀಡಿದರು.

ಶಿಬಿರದ 4ನೇ ದಿನ ಚಿತ್ರಕಲೆ ತರಬೇತಿಯನ್ನು ಶಾಲಾ ಹಳೆ ವಿದ್ಯಾರ್ಥಿಯಾದ ಸಂತೋಷ್ ಗೋಖಲೆಯವರು ನೀಡಿದರು. ಶಾಲಾ ಶಿಕ್ಷಕಿ ಕುಮಾರಿ ಲೋಲಾಕ್ಷಿ ಯವರು ತುಳು ಲಿಪಿಯನ್ನು ಕಲಿಸಿಕೊಟ್ಟರು. ಮತ್ತು ಹಳೇ ಬಟ್ಟೆಗಳಿಂದ ಕಾಲು ಒರೆಸುವ ಮ್ಯಾಟ್ ತಯಾರಿಸಲು ವಿದ್ಯಾರ್ಥಿಗಳಿಗೆ ಶ್ರೀಮತಿ ಸರೋಜಿನಿಯವರು ಕಲಿಸಿಕೊಟ್ಟರು. ಎಲ್ಲಾ ವಿದ್ಯಾರ್ಥಿಗಳು ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ: ಅಗ್ರಿಲೀಫ್ ಕುಟುಂಬದ ವತಿಯಿಂದ ರೈತರ ಜೊತೆ ವಿಶ್ವದ ಕಡೆ ರೈತ-ಸಂಸ್ಥೆ ಸಮನ್ವಯ ಸಭೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya
error: Content is protected !!