July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!