ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 4 ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಶಾಲಾ ಮುಖ್ಯ ಗುರುಗಳು ಚುರುಮುರಿ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕನಾದ ಮಾಸ್ಟರ್ ಹರಿಕೀರ್ತನ್ ವಹಿಸಿದ್ದರು.
ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ಶಿಬಿರಗಳು ಬಹಳ ಸೂಕ್ತವಾಗಿದೆ.ಆದ್ದರಿಂದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿಯಾದ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳು ಬೆಂಕಿ ಇಲ್ಲದ ಅಡುಗೆ ತಯಾರಿಯನ್ನು ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಶ್ರೀಮತಿ ಉಷಾ ನಿರೂಪಿಸಿದ ಕಾರ್ಯಕ್ರಮಕ್ಕೆ ಕಮಲ್ ತೇಜು ರಜಪೂತ್ ವಂದಿಸಿದರು.

Leave a Comment

error: Content is protected !!