25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

ವೇಣೂರು: ಕಳೆದ 15 ದಿನಗಳಿಂದ ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಸ್ಥಿಮಿತವಿಲ್ಲದ ವಯೋವೃದ್ಧ ಅಲೆಮಾರಿಯಾಗಿ ತಿರುಗಾಡುತಿದ್ದುದನ್ನು ಕಂಡ ಸ್ಥಳೀಯರು ವೇಣೂರು ಪೋಲೀಸ್ ಠಾಣೆಗೆ ತಿಳಿಸಿ, ಪುನರ್ವಸತಿ ಕಲ್ಪಿಸಿದ‌ ಮಾನವೀಯತೆಯ ಪ್ರಸಂಗ ಬೆಳಕಿಗೆ ಬಂದಿದೆ.
ಈ ಅಸ್ವಸ್ಥ ಉಡುಪಿಯ ಕಾಪುವಿನ ಪರಿಸರದ ರಮೇಶ್ ಪೂಜಾರಿ ಎಂದು ಗುರುತಿಸಲಾಗಿದ್ದು.ಬಂಧು ಬಳಗದ ಸಂಬಂಧ ಕಳಚಿ , ಅನಾವಶ್ಯಕ ತೊಂದರೆ ಕೊಡುತ್ತಿದ್ದು ಕ್ರಮೇಣ ಮಾನಸಿಕ ಸ್ಥಿಮಿತ ಕಳೆದು ಊರೂರು ಅಲೆಯುತಿದ್ದು ಕಾಪು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸದ್ಯ ಈ ವ್ಯಕ್ತಿ ವೇಣೂರು ಸಮೀಪದ ಗುಂಡೂರಿ‌ ಗ್ರಾಮದ ಅಂಗಡಿ ಮುಂಗಟ್ಟುಗಳ ಮಧ್ಯೆ ಅನಾಥವಾಗಿ ತಿರುಗಾಡುತ್ತಿದ್ದ ನ್ನು, ಕಂಡ ಸ್ಥಳೀಯರಾದ ಸುಕೇಶ್ ಪೂಜಾರಿ, ಪ್ರವೀಣ್ ಆಚಾರ್ಯ, ಇವರು ವೇಣೂರು ಪೋಲೀಸ್ ಠಾಣೆಗೆ ಸಂಪರ್ಕಿಸಿ ಸಹಾಯಕ್ಕಾಗಿ ವಿನಂತಿಸಿದಂತೆಯೇ, ಇದಕ್ಕೆ ಗುಂಡೂರಿಯ ಶ್ರೀಗುರು ಚೈತನ್ಯವನ್ನು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳರವರು ಪೋಲೀಸರ ಜತೆ ಸಹಕರಿಸಿ ಈ ವ್ಯಕ್ತಿಯ ಬಂಧುಗಳ ಪತ್ತೆ ಹಚ್ಚಿ ಪೋಲೀಸ್ ಠಾಣೆಗೆ ಕರೆಸಿ ಅವರ ಸಮಸ್ಯೆ ಆಲಿಸಿ ಬಂಧುಗಳ ಒಪ್ಪಿಗೆಯಂತೆಯೇ ಸೇವಾಶ್ರಮದಲ್ಲಿ ಎ.3ರಂದು ಪುನರ್ವಸತಿ ಕಲ್ಪಿಸಲಾಯಿತು .
ಪೂಲೀಸರ,ಸ್ಥಳೀಯರ, ಶ್ರೀಗುರು ಚೈತನ್ಯ ಸೇವಾಶ್ರಮದ ಈ ಮಾನವೀಯತೆಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related posts

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya
error: Content is protected !!