September 6, 2026
ಗ್ರಾಮಾಂತರ ಸುದ್ದಿ

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

ವೇಣೂರು: ಕಳೆದ 15 ದಿನಗಳಿಂದ ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಸ್ಥಿಮಿತವಿಲ್ಲದ ವಯೋವೃದ್ಧ ಅಲೆಮಾರಿಯಾಗಿ ತಿರುಗಾಡುತಿದ್ದುದನ್ನು ಕಂಡ ಸ್ಥಳೀಯರು ವೇಣೂರು ಪೋಲೀಸ್ ಠಾಣೆಗೆ ತಿಳಿಸಿ, ಪುನರ್ವಸತಿ ಕಲ್ಪಿಸಿದ‌ ಮಾನವೀಯತೆಯ ಪ್ರಸಂಗ ಬೆಳಕಿಗೆ ಬಂದಿದೆ.
ಈ ಅಸ್ವಸ್ಥ ಉಡುಪಿಯ ಕಾಪುವಿನ ಪರಿಸರದ ರಮೇಶ್ ಪೂಜಾರಿ ಎಂದು ಗುರುತಿಸಲಾಗಿದ್ದು.ಬಂಧು ಬಳಗದ ಸಂಬಂಧ ಕಳಚಿ , ಅನಾವಶ್ಯಕ ತೊಂದರೆ ಕೊಡುತ್ತಿದ್ದು ಕ್ರಮೇಣ ಮಾನಸಿಕ ಸ್ಥಿಮಿತ ಕಳೆದು ಊರೂರು ಅಲೆಯುತಿದ್ದು ಕಾಪು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸದ್ಯ ಈ ವ್ಯಕ್ತಿ ವೇಣೂರು ಸಮೀಪದ ಗುಂಡೂರಿ‌ ಗ್ರಾಮದ ಅಂಗಡಿ ಮುಂಗಟ್ಟುಗಳ ಮಧ್ಯೆ ಅನಾಥವಾಗಿ ತಿರುಗಾಡುತ್ತಿದ್ದ ನ್ನು, ಕಂಡ ಸ್ಥಳೀಯರಾದ ಸುಕೇಶ್ ಪೂಜಾರಿ, ಪ್ರವೀಣ್ ಆಚಾರ್ಯ, ಇವರು ವೇಣೂರು ಪೋಲೀಸ್ ಠಾಣೆಗೆ ಸಂಪರ್ಕಿಸಿ ಸಹಾಯಕ್ಕಾಗಿ ವಿನಂತಿಸಿದಂತೆಯೇ, ಇದಕ್ಕೆ ಗುಂಡೂರಿಯ ಶ್ರೀಗುರು ಚೈತನ್ಯವನ್ನು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳರವರು ಪೋಲೀಸರ ಜತೆ ಸಹಕರಿಸಿ ಈ ವ್ಯಕ್ತಿಯ ಬಂಧುಗಳ ಪತ್ತೆ ಹಚ್ಚಿ ಪೋಲೀಸ್ ಠಾಣೆಗೆ ಕರೆಸಿ ಅವರ ಸಮಸ್ಯೆ ಆಲಿಸಿ ಬಂಧುಗಳ ಒಪ್ಪಿಗೆಯಂತೆಯೇ ಸೇವಾಶ್ರಮದಲ್ಲಿ ಎ.3ರಂದು ಪುನರ್ವಸತಿ ಕಲ್ಪಿಸಲಾಯಿತು .
ಪೂಲೀಸರ,ಸ್ಥಳೀಯರ, ಶ್ರೀಗುರು ಚೈತನ್ಯ ಸೇವಾಶ್ರಮದ ಈ ಮಾನವೀಯತೆಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related posts

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya
error: Content is protected !!