22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

ವೇಣೂರು: ಕಳೆದ 15 ದಿನಗಳಿಂದ ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಸ್ಥಿಮಿತವಿಲ್ಲದ ವಯೋವೃದ್ಧ ಅಲೆಮಾರಿಯಾಗಿ ತಿರುಗಾಡುತಿದ್ದುದನ್ನು ಕಂಡ ಸ್ಥಳೀಯರು ವೇಣೂರು ಪೋಲೀಸ್ ಠಾಣೆಗೆ ತಿಳಿಸಿ, ಪುನರ್ವಸತಿ ಕಲ್ಪಿಸಿದ‌ ಮಾನವೀಯತೆಯ ಪ್ರಸಂಗ ಬೆಳಕಿಗೆ ಬಂದಿದೆ.
ಈ ಅಸ್ವಸ್ಥ ಉಡುಪಿಯ ಕಾಪುವಿನ ಪರಿಸರದ ರಮೇಶ್ ಪೂಜಾರಿ ಎಂದು ಗುರುತಿಸಲಾಗಿದ್ದು.ಬಂಧು ಬಳಗದ ಸಂಬಂಧ ಕಳಚಿ , ಅನಾವಶ್ಯಕ ತೊಂದರೆ ಕೊಡುತ್ತಿದ್ದು ಕ್ರಮೇಣ ಮಾನಸಿಕ ಸ್ಥಿಮಿತ ಕಳೆದು ಊರೂರು ಅಲೆಯುತಿದ್ದು ಕಾಪು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸದ್ಯ ಈ ವ್ಯಕ್ತಿ ವೇಣೂರು ಸಮೀಪದ ಗುಂಡೂರಿ‌ ಗ್ರಾಮದ ಅಂಗಡಿ ಮುಂಗಟ್ಟುಗಳ ಮಧ್ಯೆ ಅನಾಥವಾಗಿ ತಿರುಗಾಡುತ್ತಿದ್ದ ನ್ನು, ಕಂಡ ಸ್ಥಳೀಯರಾದ ಸುಕೇಶ್ ಪೂಜಾರಿ, ಪ್ರವೀಣ್ ಆಚಾರ್ಯ, ಇವರು ವೇಣೂರು ಪೋಲೀಸ್ ಠಾಣೆಗೆ ಸಂಪರ್ಕಿಸಿ ಸಹಾಯಕ್ಕಾಗಿ ವಿನಂತಿಸಿದಂತೆಯೇ, ಇದಕ್ಕೆ ಗುಂಡೂರಿಯ ಶ್ರೀಗುರು ಚೈತನ್ಯವನ್ನು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳರವರು ಪೋಲೀಸರ ಜತೆ ಸಹಕರಿಸಿ ಈ ವ್ಯಕ್ತಿಯ ಬಂಧುಗಳ ಪತ್ತೆ ಹಚ್ಚಿ ಪೋಲೀಸ್ ಠಾಣೆಗೆ ಕರೆಸಿ ಅವರ ಸಮಸ್ಯೆ ಆಲಿಸಿ ಬಂಧುಗಳ ಒಪ್ಪಿಗೆಯಂತೆಯೇ ಸೇವಾಶ್ರಮದಲ್ಲಿ ಎ.3ರಂದು ಪುನರ್ವಸತಿ ಕಲ್ಪಿಸಲಾಯಿತು .
ಪೂಲೀಸರ,ಸ್ಥಳೀಯರ, ಶ್ರೀಗುರು ಚೈತನ್ಯ ಸೇವಾಶ್ರಮದ ಈ ಮಾನವೀಯತೆಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya
error: Content is protected !!