27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲ್ಪಟ್ಟ ಬೇಸಿಗೆ ಶಿಬಿರದಲ್ಲಿ ಗಾಯನ ತರಬೇತಿಯು ನಡೆಯಿತು.

ತರಬೇತುದಾರರಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಆಶಾ ಮತ್ತು ಶ್ರೀಮತಿ ಶಶಿಕಲಾರವರು ಆಗಮಿಸಿದ್ದರು. ತರಬೇತಿಯನ್ನು ಆರಂಭಿಸಿ ಶ್ರೀಮತಿ ಆಶಾರವರು ಮಾತನಾಡುತ್ತಾ, ಎಲ್ಲರು ಹಾಡುಗಾರರಾಗಲು ಸಾಧ್ಯವಿಲ್ಲದಿದ್ದರೂ ಗಾಯನವನ್ನು ಆಲಿಸುವುದರ ಮೂಲಕ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿಯನ್ನು ತಂದುಕೊಂಡು, ಒತ್ತಡ ಮುಕ್ತವಾಗಿ ಬದುಕಲು ಸಾಧ್ಯ. ಅಸಾಧ್ಯವೆಂಬ ನಕಾರಾತ್ಮಕ ಮನೋಭಾವವನ್ನು ದೂರೀಕರಿಸಿ ಸಕಾರಾತ್ಮಕವಾಗಿ ಮನಸ್ಸನ್ನು ರೂಪುಗೊಳಿಸಲೂ ಸಂಗೀತ, ಗಾಯನ ಪರಿಣಾಮಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ವಿದ್ಯಾರ್ಥಿಗಳಾದ ಕು. ನಿಶ್ಮಿತಾ ಸ್ವಾಗತಿಸಿ ಕು. ಯೋಗಿತಾ ಧನ್ಯವಾದ ಸಲ್ಲಿಸಿದರು, ಕು. ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ (ತೆನೆ ) ಹಬ್ಬ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
error: Content is protected !!