ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲ್ಪಟ್ಟ ಬೇಸಿಗೆ ಶಿಬಿರದಲ್ಲಿ ಗಾಯನ ತರಬೇತಿಯು ನಡೆಯಿತು.

ತರಬೇತುದಾರರಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಆಶಾ ಮತ್ತು ಶ್ರೀಮತಿ ಶಶಿಕಲಾರವರು ಆಗಮಿಸಿದ್ದರು. ತರಬೇತಿಯನ್ನು ಆರಂಭಿಸಿ ಶ್ರೀಮತಿ ಆಶಾರವರು ಮಾತನಾಡುತ್ತಾ, ಎಲ್ಲರು ಹಾಡುಗಾರರಾಗಲು ಸಾಧ್ಯವಿಲ್ಲದಿದ್ದರೂ ಗಾಯನವನ್ನು ಆಲಿಸುವುದರ ಮೂಲಕ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿಯನ್ನು ತಂದುಕೊಂಡು, ಒತ್ತಡ ಮುಕ್ತವಾಗಿ ಬದುಕಲು ಸಾಧ್ಯ. ಅಸಾಧ್ಯವೆಂಬ ನಕಾರಾತ್ಮಕ ಮನೋಭಾವವನ್ನು ದೂರೀಕರಿಸಿ ಸಕಾರಾತ್ಮಕವಾಗಿ ಮನಸ್ಸನ್ನು ರೂಪುಗೊಳಿಸಲೂ ಸಂಗೀತ, ಗಾಯನ ಪರಿಣಾಮಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ವಿದ್ಯಾರ್ಥಿಗಳಾದ ಕು. ನಿಶ್ಮಿತಾ ಸ್ವಾಗತಿಸಿ ಕು. ಯೋಗಿತಾ ಧನ್ಯವಾದ ಸಲ್ಲಿಸಿದರು, ಕು. ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya
error: Content is protected !!