23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

ಬೆಳ್ತಂಗಡಿ: ಸದಾ ಸೇವೆಯಲ್ಲಿ ತನ್ನನ್ನು ತಾನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿರುವ ವಿಭಿನ್ನ ಶೈಲಿಯ ಸಾಮಾಜಿಕ ಶೈಕ್ಷಣಿಕ ಕ್ರೀಡಾ ಶಿಕ್ಷಣ ಕೆಲಸಗಳಲ್ಲಿ ರಾಜ್ಯಕ್ಕೆ ಮಾದರಿಯಾಗಿರುವ ರಾಜ ಕೇಸರಿ ಸಂಘಟನೆಯ 547 ಸೇವಾ ಯೋಜನೆ ಪ್ರಯುಕ್ತ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಲೀಲಾವತಿ ಅವರ ಹೊಸ ಮನೆ ಮೈರಾರು ಓಡಿಲ್ನಾಳ ಇವರ ಮನೆಯ ವೈರಿಂಗ್ ಕೆಲಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು. ಅದನ್ನು ಪೂರ್ಣಗೊಳಿಸಿ ಇವತ್ತು ಅವರಿಗೆ ಹಸ್ತಾಂತರಿಸಲಾಯಿತು.


ಮನೆಯ ಸಂಪೂರ್ಣ ವೈರಿಂಗ್ ಕೆಲಸ ಮತ್ತು ಖರ್ಚು ವೆಚ್ಚಗಳನ್ನು ಲೋಬೊ ಟವರ್ಸ್ ನಲ್ಲಿರುವ ಗಣೇಶ್ ಎಲೆಕ್ಟ್ರಿಕಲ್ಸ್ ಕೆ ಬಿ ರೋಡ್. ಇದರ ಮಾಲಕರಾದ ಯಜ್ಞೇಶ್ ರೈ .. ಇವರ ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ದಿನದ ಹುಟ್ಟುಹಬ್ಬವನ್ನು ಲೀಲಾವತಿಯವರ ಹೊಸ ಮನೆಯಲ್ಲಿ ಕೇಕ್ ಕತ್ತರಿಸುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್, ರಾಜ ಕೇಸರಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ, ಸದಸ್ಯರುಗಳಾದ ದೇವರಾಜ್, ಸಂದೇಶ್, ಶ್ರೀನಿವಾಸ್ ಮಂಜೊಟ್ಟಿ ಉಪಸ್ಥಿತರಿದ್ದರು

Related posts

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya
error: Content is protected !!