September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

ಬೆಳ್ತಂಗಡಿ: ಸದಾ ಸೇವೆಯಲ್ಲಿ ತನ್ನನ್ನು ತಾನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿರುವ ವಿಭಿನ್ನ ಶೈಲಿಯ ಸಾಮಾಜಿಕ ಶೈಕ್ಷಣಿಕ ಕ್ರೀಡಾ ಶಿಕ್ಷಣ ಕೆಲಸಗಳಲ್ಲಿ ರಾಜ್ಯಕ್ಕೆ ಮಾದರಿಯಾಗಿರುವ ರಾಜ ಕೇಸರಿ ಸಂಘಟನೆಯ 547 ಸೇವಾ ಯೋಜನೆ ಪ್ರಯುಕ್ತ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಲೀಲಾವತಿ ಅವರ ಹೊಸ ಮನೆ ಮೈರಾರು ಓಡಿಲ್ನಾಳ ಇವರ ಮನೆಯ ವೈರಿಂಗ್ ಕೆಲಸದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡು. ಅದನ್ನು ಪೂರ್ಣಗೊಳಿಸಿ ಇವತ್ತು ಅವರಿಗೆ ಹಸ್ತಾಂತರಿಸಲಾಯಿತು.


ಮನೆಯ ಸಂಪೂರ್ಣ ವೈರಿಂಗ್ ಕೆಲಸ ಮತ್ತು ಖರ್ಚು ವೆಚ್ಚಗಳನ್ನು ಲೋಬೊ ಟವರ್ಸ್ ನಲ್ಲಿರುವ ಗಣೇಶ್ ಎಲೆಕ್ಟ್ರಿಕಲ್ಸ್ ಕೆ ಬಿ ರೋಡ್. ಇದರ ಮಾಲಕರಾದ ಯಜ್ಞೇಶ್ ರೈ .. ಇವರ ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಈ ದಿನದ ಹುಟ್ಟುಹಬ್ಬವನ್ನು ಲೀಲಾವತಿಯವರ ಹೊಸ ಮನೆಯಲ್ಲಿ ಕೇಕ್ ಕತ್ತರಿಸುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್, ರಾಜ ಕೇಸರಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ, ಸದಸ್ಯರುಗಳಾದ ದೇವರಾಜ್, ಸಂದೇಶ್, ಶ್ರೀನಿವಾಸ್ ಮಂಜೊಟ್ಟಿ ಉಪಸ್ಥಿತರಿದ್ದರು

Related posts

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!