April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು ಸಂಜೆ ನಡೆದಿದೆ

ಬೈಕ್ ಸವಾರರನ್ನು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂತರ ಪರಿಸರದ ನಿವಾಸಿಗಳಾದ ಗೌತಮ್ ಮತ್ತು ಪ್ರಜಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಪ್ರಿಲ್ 02 ರಂದು ಸಂಜೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಶಿರ್ತಾಡಿ-ಸಾವ್ಯ- ಕೊಕ್ರಾಡಿ ಸಾರ್ವಜನಿಕ ರಸ್ತೆಯಲ್ಲಿ ಪಿಕಪ್‌ ವಾಹನ ನಂಬ್ರ ಕೆಎ-19-AE-2296 ಅದರ ಚಾಲಕ ಕೊಕ್ರಾಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ ಪರಿಣಾಮ, ಪಿಕ್ ಅಪ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಂಬ್ರ KA-19-EW-5312 ಸವಾರ ಪ್ರಜೀತ್ ಎಂಬವರು, ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದು, ಸವಾರ ಹಾಗೂ ಸಹಸವಾರ ಗೌತಮ್ ಬೈಕ್ ಸಮೇತವಾಗಿ ರಸ್ತೆಗೆ ಬಿದ್ದಿರುತ್ತಾರೆ.ಗಂಭೀರ ಗಾಯಗೊಂಡಿರುವ ಅವರುಗಳನ್ನು ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಜಿತ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಗೌತಮ್ ಅವರಿಗೆ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವರ ನಿವಾಸಿ ರಂಜಿತ್ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!