24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು ಸಂಜೆ ನಡೆದಿದೆ

ಬೈಕ್ ಸವಾರರನ್ನು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂತರ ಪರಿಸರದ ನಿವಾಸಿಗಳಾದ ಗೌತಮ್ ಮತ್ತು ಪ್ರಜಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಪ್ರಿಲ್ 02 ರಂದು ಸಂಜೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಶಿರ್ತಾಡಿ-ಸಾವ್ಯ- ಕೊಕ್ರಾಡಿ ಸಾರ್ವಜನಿಕ ರಸ್ತೆಯಲ್ಲಿ ಪಿಕಪ್‌ ವಾಹನ ನಂಬ್ರ ಕೆಎ-19-AE-2296 ಅದರ ಚಾಲಕ ಕೊಕ್ರಾಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ ಪರಿಣಾಮ, ಪಿಕ್ ಅಪ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಂಬ್ರ KA-19-EW-5312 ಸವಾರ ಪ್ರಜೀತ್ ಎಂಬವರು, ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದು, ಸವಾರ ಹಾಗೂ ಸಹಸವಾರ ಗೌತಮ್ ಬೈಕ್ ಸಮೇತವಾಗಿ ರಸ್ತೆಗೆ ಬಿದ್ದಿರುತ್ತಾರೆ.ಗಂಭೀರ ಗಾಯಗೊಂಡಿರುವ ಅವರುಗಳನ್ನು ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಜಿತ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಗೌತಮ್ ಅವರಿಗೆ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವರ ನಿವಾಸಿ ರಂಜಿತ್ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!