September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು ಸಂಜೆ ನಡೆದಿದೆ

ಬೈಕ್ ಸವಾರರನ್ನು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂತರ ಪರಿಸರದ ನಿವಾಸಿಗಳಾದ ಗೌತಮ್ ಮತ್ತು ಪ್ರಜಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಪ್ರಿಲ್ 02 ರಂದು ಸಂಜೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಶಿರ್ತಾಡಿ-ಸಾವ್ಯ- ಕೊಕ್ರಾಡಿ ಸಾರ್ವಜನಿಕ ರಸ್ತೆಯಲ್ಲಿ ಪಿಕಪ್‌ ವಾಹನ ನಂಬ್ರ ಕೆಎ-19-AE-2296 ಅದರ ಚಾಲಕ ಕೊಕ್ರಾಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ ಪರಿಣಾಮ, ಪಿಕ್ ಅಪ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಂಬ್ರ KA-19-EW-5312 ಸವಾರ ಪ್ರಜೀತ್ ಎಂಬವರು, ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದು, ಸವಾರ ಹಾಗೂ ಸಹಸವಾರ ಗೌತಮ್ ಬೈಕ್ ಸಮೇತವಾಗಿ ರಸ್ತೆಗೆ ಬಿದ್ದಿರುತ್ತಾರೆ.ಗಂಭೀರ ಗಾಯಗೊಂಡಿರುವ ಅವರುಗಳನ್ನು ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಜಿತ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಗೌತಮ್ ಅವರಿಗೆ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವರ ನಿವಾಸಿ ರಂಜಿತ್ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya
error: Content is protected !!