September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು ಸಂಜೆ ನಡೆದಿದೆ

ಬೈಕ್ ಸವಾರರನ್ನು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂತರ ಪರಿಸರದ ನಿವಾಸಿಗಳಾದ ಗೌತಮ್ ಮತ್ತು ಪ್ರಜಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಪ್ರಿಲ್ 02 ರಂದು ಸಂಜೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಶಿರ್ತಾಡಿ-ಸಾವ್ಯ- ಕೊಕ್ರಾಡಿ ಸಾರ್ವಜನಿಕ ರಸ್ತೆಯಲ್ಲಿ ಪಿಕಪ್‌ ವಾಹನ ನಂಬ್ರ ಕೆಎ-19-AE-2296 ಅದರ ಚಾಲಕ ಕೊಕ್ರಾಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ ಪರಿಣಾಮ, ಪಿಕ್ ಅಪ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಂಬ್ರ KA-19-EW-5312 ಸವಾರ ಪ್ರಜೀತ್ ಎಂಬವರು, ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದು, ಸವಾರ ಹಾಗೂ ಸಹಸವಾರ ಗೌತಮ್ ಬೈಕ್ ಸಮೇತವಾಗಿ ರಸ್ತೆಗೆ ಬಿದ್ದಿರುತ್ತಾರೆ.ಗಂಭೀರ ಗಾಯಗೊಂಡಿರುವ ಅವರುಗಳನ್ನು ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಜಿತ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಗೌತಮ್ ಅವರಿಗೆ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವರ ನಿವಾಸಿ ರಂಜಿತ್ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಪಡಂಗಡಿ ಮತ್ತು ಗರ್ಡಾಡಿ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!