23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ ಸಲಹೆ-ಸೂಚನೆ, ಮಾಗ೯ದರ್ಶನ ಹಾಗೂ ಪಾಲ್ಗೊಳ್ಳುವಿಕೆಯಲ್ಲಿ ಕುಂಟೆಬಿಲ್ಲೆ, ಲಗೋರಿ, ಟೋಪಿ ಬೇಕಾ ಟೋಪಿ, ಸೊಪ್ಪಾಟ, ಕಲ್ಲಾಟ, ಪಗಡೆಯಾಟ, ಅಡಿಕೆ ಹಾಳೆಯಲ್ಲಿ ಕುಳಿತು ಎಳೆಯುವುದು, ಚೆನ್ನೆಮಣೆ ಆಟಗಳು, ತೆಂಗಿನ ಮರದ ಎಲೆಗಳಿಂದ ವಾಚು, ಕನ್ನಡಕ, ಹಾವು, ಗಿರಗಿಟ್ಟೆ ಮಾಡಲಾಯಿತು. ವಿದ್ಯಾರ್ಥಿಗಳು ಆಟದಲ್ಲಿ ಅತ್ಯುತ್ಸಾಹದಿಂದ ಪಾಲ್ಗೊಂಡರು.

ಬೇಸಿಗೆ ಶಿಬಿರದ 3ನೇ ದಿನ ಸೀರೆಯ ಸೆರಗಿಗೆ ಗೊಂಡೆ ಹಾಕುವುದು. ಇದರ ಬಗ್ಗೆ ಆಶಾ ಕಾರ್ಯಕರ್ತೆಯಾದ ಶ್ರೀಮತಿ ಸರೋಜಿನಿಯವರು ತರಬೇತಿಯನ್ನು ನೀಡಿದರು. ಹಾಗೂ ಮುರಳಿ ಬ್ರದರ್ಸ್ ಡಾನ್ಸ್ ತಂಡದವರು ನೃತ್ಯ ತರಬೇತಿಯನ್ನು ನೀಡಿದರು.

ಶಿಬಿರದ 4ನೇ ದಿನ ಚಿತ್ರಕಲೆ ತರಬೇತಿಯನ್ನು ಶಾಲಾ ಹಳೆ ವಿದ್ಯಾರ್ಥಿಯಾದ ಸಂತೋಷ್ ಗೋಖಲೆಯವರು ನೀಡಿದರು. ಶಾಲಾ ಶಿಕ್ಷಕಿ ಕುಮಾರಿ ಲೋಲಾಕ್ಷಿ ಯವರು ತುಳು ಲಿಪಿಯನ್ನು ಕಲಿಸಿಕೊಟ್ಟರು. ಮತ್ತು ಹಳೇ ಬಟ್ಟೆಗಳಿಂದ ಕಾಲು ಒರೆಸುವ ಮ್ಯಾಟ್ ತಯಾರಿಸಲು ವಿದ್ಯಾರ್ಥಿಗಳಿಗೆ ಶ್ರೀಮತಿ ಸರೋಜಿನಿಯವರು ಕಲಿಸಿಕೊಟ್ಟರು. ಎಲ್ಲಾ ವಿದ್ಯಾರ್ಥಿಗಳು ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!