23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ, ನಾಗ ದೇವರಿಗೆ ನವಕ ಪ್ರಧಾನ ತಂಬಿಲ, ಪ್ರಸನ್ನ ಪೂಜೆ ಮತ್ತು ಮೂಜಿಲ್ನಾಯ ಬ್ರಹ್ಮ ದೇವರಿಗೆ ನವಕ ಪ್ರಧಾನ, ಪ್ರಸನ್ನ ಪೂಜೆ. ಮಧ್ಯಾಹ್ನ ಗಂಟೆ 3.30ಕ್ಕೆ ಗ್ರಾಮಸ್ಥರಿಂದ ಅರ್ಪಿತವಾದ ಹೊರೆಕಾಣಿಕೆ ಸ್ವೀಕರಿಸಿ, ಉಗ್ರಾಣ ತುಂಬಿಸುವುದು. ಸಂಜೆ ಗಂಟೆ 4.30ಕ್ಕೆ ಚೆಂಡು, ರಾತ್ರಿ ಗಂಟೆ 8.00ಕ್ಕೆ ಧ್ವಜಾರೋಹಣ, ತಂಬಿಲ ಬಲಿ ಉತ್ಸವ, ಜಾಲಾಟ

ಎ.14ರಂದು ಸಂಜೆ ಗಂಟೆ 5.30ಕ್ಕೆ ನಡಿಬೆಟ್ಟು ಗುತ್ತಿನಿಂದ ಭಂಡಾರ ಹೊರಟು ಕ್ಷೇತ್ರಕ್ಕೆ ಬರುವುದು. ರಾತ್ರಿ ಗಂಟೆ 7.00ರಿಂದ 8.00ರ ವರೆಗೆ ಮಲ್ಲಿಪಾಡಿ ಶ್ರೀ ಸದಾಶಿವ ಭಜನಾ ಮಂಡಳಿ ಇವರಿಂದ ಕುಣಿತ ಭಜನೆ, ರಾತ್ರಿ ಗಂಟೆ 7.30ರಿಂದ ಪೂಜೆ, ಬಲಿ ಉತ್ಸವ, ರಾತ್ರಿ ಗಂಟೆ 9.30ರಿಂದ ಮಹಾ ದೈವ ಮೂಜಿಲ್ನಾಯ, ಪಿಲಿಚಾಮುಂಡಿ, ಭೈರವ, ಪಂಜುರ್ಲಿ ನೇಮ, ನುಡಿಕಟ್ಟು, ಆಹಾರ ಬಲಿ, ಭಂಡಾರ ನಿರ್ಗಮನ

ಎ. 15ರಂದು ಬೆಳಿಗ್ಗೆ ಗಂಟೆ 6.00ಕ್ಕೆ ಅವಕೃತ, ಧ್ವಜಾವರೋಹಣ, ಸಂಪ್ರೋಕ್ಷಣೆ ಕಲಶ, ಪ್ರಸನ್ನ ಪೂಜೆ ನಡೆಯಲಿದೆ

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಲಾಯಿಲ : ದಯಾ ವಿಶೇಷ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya
error: Content is protected !!