July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 4 ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು.


ಉದ್ಘಾಟನಾ ಸಮಾರಂಭವನ್ನು ಶಾಲಾ ಮುಖ್ಯ ಗುರುಗಳು ಚುರುಮುರಿ ಮಾಡುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕನಾದ ಮಾಸ್ಟರ್ ಹರಿಕೀರ್ತನ್ ವಹಿಸಿದ್ದರು.
ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರಹಾಕಲು ಇಂತಹ ಶಿಬಿರಗಳು ಬಹಳ ಸೂಕ್ತವಾಗಿದೆ.ಆದ್ದರಿಂದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿಯಾದ ಶ್ರೀಮತಿ ಶ್ರೀಜಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳು ಬೆಂಕಿ ಇಲ್ಲದ ಅಡುಗೆ ತಯಾರಿಯನ್ನು ಮಾಡಿ ಸಂಭ್ರಮಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಿಸಲಾಯಿತು. ಶ್ರೀಮತಿ ಉಷಾ ನಿರೂಪಿಸಿದ ಕಾರ್ಯಕ್ರಮಕ್ಕೆ ಕಮಲ್ ತೇಜು ರಜಪೂತ್ ವಂದಿಸಿದರು.

Related posts

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ನಿಷೇಧ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya
error: Content is protected !!