23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

ವೇಣೂರು: ಕಳೆದ 15 ದಿನಗಳಿಂದ ವೇಣೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನಸಿಕ ಸ್ಥಿಮಿತವಿಲ್ಲದ ವಯೋವೃದ್ಧ ಅಲೆಮಾರಿಯಾಗಿ ತಿರುಗಾಡುತಿದ್ದುದನ್ನು ಕಂಡ ಸ್ಥಳೀಯರು ವೇಣೂರು ಪೋಲೀಸ್ ಠಾಣೆಗೆ ತಿಳಿಸಿ, ಪುನರ್ವಸತಿ ಕಲ್ಪಿಸಿದ‌ ಮಾನವೀಯತೆಯ ಪ್ರಸಂಗ ಬೆಳಕಿಗೆ ಬಂದಿದೆ.
ಈ ಅಸ್ವಸ್ಥ ಉಡುಪಿಯ ಕಾಪುವಿನ ಪರಿಸರದ ರಮೇಶ್ ಪೂಜಾರಿ ಎಂದು ಗುರುತಿಸಲಾಗಿದ್ದು.ಬಂಧು ಬಳಗದ ಸಂಬಂಧ ಕಳಚಿ , ಅನಾವಶ್ಯಕ ತೊಂದರೆ ಕೊಡುತ್ತಿದ್ದು ಕ್ರಮೇಣ ಮಾನಸಿಕ ಸ್ಥಿಮಿತ ಕಳೆದು ಊರೂರು ಅಲೆಯುತಿದ್ದು ಕಾಪು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಸದ್ಯ ಈ ವ್ಯಕ್ತಿ ವೇಣೂರು ಸಮೀಪದ ಗುಂಡೂರಿ‌ ಗ್ರಾಮದ ಅಂಗಡಿ ಮುಂಗಟ್ಟುಗಳ ಮಧ್ಯೆ ಅನಾಥವಾಗಿ ತಿರುಗಾಡುತ್ತಿದ್ದ ನ್ನು, ಕಂಡ ಸ್ಥಳೀಯರಾದ ಸುಕೇಶ್ ಪೂಜಾರಿ, ಪ್ರವೀಣ್ ಆಚಾರ್ಯ, ಇವರು ವೇಣೂರು ಪೋಲೀಸ್ ಠಾಣೆಗೆ ಸಂಪರ್ಕಿಸಿ ಸಹಾಯಕ್ಕಾಗಿ ವಿನಂತಿಸಿದಂತೆಯೇ, ಇದಕ್ಕೆ ಗುಂಡೂರಿಯ ಶ್ರೀಗುರು ಚೈತನ್ಯವನ್ನು ಸೇವಾಶ್ರಮದ ಹೊನ್ನಯ್ಯ ಕಾಟಿಪಳ್ಳರವರು ಪೋಲೀಸರ ಜತೆ ಸಹಕರಿಸಿ ಈ ವ್ಯಕ್ತಿಯ ಬಂಧುಗಳ ಪತ್ತೆ ಹಚ್ಚಿ ಪೋಲೀಸ್ ಠಾಣೆಗೆ ಕರೆಸಿ ಅವರ ಸಮಸ್ಯೆ ಆಲಿಸಿ ಬಂಧುಗಳ ಒಪ್ಪಿಗೆಯಂತೆಯೇ ಸೇವಾಶ್ರಮದಲ್ಲಿ ಎ.3ರಂದು ಪುನರ್ವಸತಿ ಕಲ್ಪಿಸಲಾಯಿತು .
ಪೂಲೀಸರ,ಸ್ಥಳೀಯರ, ಶ್ರೀಗುರು ಚೈತನ್ಯ ಸೇವಾಶ್ರಮದ ಈ ಮಾನವೀಯತೆಯ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Related posts

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya
error: Content is protected !!