23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲ್ಪಟ್ಟ ಬೇಸಿಗೆ ಶಿಬಿರದಲ್ಲಿ ಗಾಯನ ತರಬೇತಿಯು ನಡೆಯಿತು.

ತರಬೇತುದಾರರಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಆಶಾ ಮತ್ತು ಶ್ರೀಮತಿ ಶಶಿಕಲಾರವರು ಆಗಮಿಸಿದ್ದರು. ತರಬೇತಿಯನ್ನು ಆರಂಭಿಸಿ ಶ್ರೀಮತಿ ಆಶಾರವರು ಮಾತನಾಡುತ್ತಾ, ಎಲ್ಲರು ಹಾಡುಗಾರರಾಗಲು ಸಾಧ್ಯವಿಲ್ಲದಿದ್ದರೂ ಗಾಯನವನ್ನು ಆಲಿಸುವುದರ ಮೂಲಕ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿಯನ್ನು ತಂದುಕೊಂಡು, ಒತ್ತಡ ಮುಕ್ತವಾಗಿ ಬದುಕಲು ಸಾಧ್ಯ. ಅಸಾಧ್ಯವೆಂಬ ನಕಾರಾತ್ಮಕ ಮನೋಭಾವವನ್ನು ದೂರೀಕರಿಸಿ ಸಕಾರಾತ್ಮಕವಾಗಿ ಮನಸ್ಸನ್ನು ರೂಪುಗೊಳಿಸಲೂ ಸಂಗೀತ, ಗಾಯನ ಪರಿಣಾಮಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ವಿದ್ಯಾರ್ಥಿಗಳಾದ ಕು. ನಿಶ್ಮಿತಾ ಸ್ವಾಗತಿಸಿ ಕು. ಯೋಗಿತಾ ಧನ್ಯವಾದ ಸಲ್ಲಿಸಿದರು, ಕು. ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya
error: Content is protected !!