23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲ್ಪಟ್ಟ ಬೇಸಿಗೆ ಶಿಬಿರದಲ್ಲಿ ಗಾಯನ ತರಬೇತಿಯು ನಡೆಯಿತು.

ತರಬೇತುದಾರರಾಗಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಆಶಾ ಮತ್ತು ಶ್ರೀಮತಿ ಶಶಿಕಲಾರವರು ಆಗಮಿಸಿದ್ದರು. ತರಬೇತಿಯನ್ನು ಆರಂಭಿಸಿ ಶ್ರೀಮತಿ ಆಶಾರವರು ಮಾತನಾಡುತ್ತಾ, ಎಲ್ಲರು ಹಾಡುಗಾರರಾಗಲು ಸಾಧ್ಯವಿಲ್ಲದಿದ್ದರೂ ಗಾಯನವನ್ನು ಆಲಿಸುವುದರ ಮೂಲಕ ಮನಸ್ಸಿಗೆ ಸಂತೋಷ ಮತ್ತು ನೆಮ್ಮದಿಯನ್ನು ತಂದುಕೊಂಡು, ಒತ್ತಡ ಮುಕ್ತವಾಗಿ ಬದುಕಲು ಸಾಧ್ಯ. ಅಸಾಧ್ಯವೆಂಬ ನಕಾರಾತ್ಮಕ ಮನೋಭಾವವನ್ನು ದೂರೀಕರಿಸಿ ಸಕಾರಾತ್ಮಕವಾಗಿ ಮನಸ್ಸನ್ನು ರೂಪುಗೊಳಿಸಲೂ ಸಂಗೀತ, ಗಾಯನ ಪರಿಣಾಮಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ವಿದ್ಯಾರ್ಥಿಗಳಾದ ಕು. ನಿಶ್ಮಿತಾ ಸ್ವಾಗತಿಸಿ ಕು. ಯೋಗಿತಾ ಧನ್ಯವಾದ ಸಲ್ಲಿಸಿದರು, ಕು. ತೃಪ್ತಿ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಕಲ್ಮಂಜ : ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಪಜಿರಡ್ಕ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya
error: Content is protected !!