ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ : ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನ ಸೌಧದಲ್ಲಿ ಎ.5 ರಂದು ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪೃಥ್ವಿ ಸಾನಿಕಂ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ| ಬಾಬು ಜಗಜೀವನರಾಮ್ ರವರ ಸೇವೆಯ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ಉಪಸ್ಥಿತರಿದ್ದರು.

ಸಹಾಯಕ ನಿರ್ದೇಶಕ ಹೇಮಚಂದ್ರ ಸ್ವಾಗತಿಸಿ, ಜಯಾನಂದ ಧನ್ಯವಾದವಿತ್ತರು.

Leave a Comment

error: Content is protected !!