July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು ಸಂಜೆ ನಡೆದಿದೆ

ಬೈಕ್ ಸವಾರರನ್ನು ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂತರ ಪರಿಸರದ ನಿವಾಸಿಗಳಾದ ಗೌತಮ್ ಮತ್ತು ಪ್ರಜಿತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಎಪ್ರಿಲ್ 02 ರಂದು ಸಂಜೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಶಿರ್ತಾಡಿ-ಸಾವ್ಯ- ಕೊಕ್ರಾಡಿ ಸಾರ್ವಜನಿಕ ರಸ್ತೆಯಲ್ಲಿ ಪಿಕಪ್‌ ವಾಹನ ನಂಬ್ರ ಕೆಎ-19-AE-2296 ಅದರ ಚಾಲಕ ಕೊಕ್ರಾಡಿ ಕಡೆಯಿಂದ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ ಪರಿಣಾಮ, ಪಿಕ್ ಅಪ್ ವಾಹನದ ಹಿಂದಿನಿಂದ ಬರುತ್ತಿದ್ದ ಬೈಕ್ ನಂಬ್ರ KA-19-EW-5312 ಸವಾರ ಪ್ರಜೀತ್ ಎಂಬವರು, ಪಿಕಪ್‌ ವಾಹನಕ್ಕೆ ಡಿಕ್ಕಿ ಹೊಡೆದು, ಸವಾರ ಹಾಗೂ ಸಹಸವಾರ ಗೌತಮ್ ಬೈಕ್ ಸಮೇತವಾಗಿ ರಸ್ತೆಗೆ ಬಿದ್ದಿರುತ್ತಾರೆ.ಗಂಭೀರ ಗಾಯಗೊಂಡಿರುವ ಅವರುಗಳನ್ನು ಚಿಕಿತ್ಸೆಗಾಗಿ ಮೂಡಬಿದ್ರೆ ಆಳ್ವಾಸ್‌ ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ದೇರಳಕಟ್ಟೆ ಕೆ ಎಸ್‌ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಪ್ರಜಿತ್ ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಗೌತಮ್ ಅವರಿಗೆ ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾವರ ನಿವಾಸಿ ರಂಜಿತ್ ಅವರು ನೀಡಿದ ದೂರಿನ ಮೇರೆಗೆ ವೇಣೂರು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!