ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸ್ಪೂರ್ತಿ ಬರಹಗಾರರು ಮತ್ತು ನಿವೃತ್ತ ಪ್ರಾಂಶುಪಾಲರು ಡಾ.ಪೂವಪ್ಪ ಗೌಡ ಕಣಿಯೂರು, ಮುಖ್ಯ ಅಥಿತಿಗಳಾಗಿ ಮಾಜಿ ಅಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಮಂಗಳೂರು ಲೋಕಯ್ಯ ಗೌಡ, ಗೌರವಾಧ್ಯಕ್ಷ ಗೌಡರ ಯಾನೆ ಒಕ್ಕಲಿಗರ ಸಂಘ ಬೆಳ್ತಂಗಡಿ ಹೆಚ್.ಪದ್ಮ ಗೌಡ ಭಾಗವಹಿಸಲಿದ್ದಾರೆ.

Leave a Comment

error: Content is protected !!