ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಅಳದಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ& ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya
error: Content is protected !!