July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲ ಎಂ.ಕೆ ಕೆದ್ದು ಭಾಗವಹಿಸಿ ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನರಂತೆ ಬದುಕುತ್ತಿದ್ದಾರೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾಭಿಮಾನ ಹಾಗೂ ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಶಿಕ್ಷಕಿ ಉಮಾ ಆರ್ ರಾವ್, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವ ಸಂಘಟಕಿ, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಶಾಂತಾ ಬಂಗೇರ ಕಲಾವಿದರೂ, ಲಾಯಿಲ ಗ್ರಾಮ ಪಂಚಾಯತ್ ನ ಸದಸ್ಯೆ ಆಶಾಲತಾ ಪ್ರಶಾಂತ್, ದೆಹಲಿಯ ರಿಪಬ್ಲಿಕ್ ಡೇ ಪೆರೇಡ್ ನಲ್ಲಿ ಭಾಗವಹಿಸಿದ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಸಿ. ಎಸ್. ಇವರನ್ನು ಸನ್ಮಾನಿಸಲಾಯಿತು.

ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಸ್ವಾಗತಿಸಿ, ಮಹಿಳಾ ದಿನಾಚರಣೆಯ ಮುಖಾಂತರ ನಡೆದ ಐದು ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.

ವೇದಿಕೆ ಆಹ್ವಾನವನ್ನು ಸದಸ್ಯರಾದ ಸ್ವಾತಿ ಪ್ರೀತೇಶ್, ಸನ್ಮಾನಿತರ ಪರಿಚಯವನ್ನು ಕಾರ್ಯಕ್ರಮದ ಸಂಯೋಜಕರಾದ ಹೇಮಾವತಿ ಕೆ, ಮಧುರ ರಾಘವ್ ವಾಚಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪೂರ್ವ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Related posts

ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ: ಕರಾಟೆ ಶಿಕ್ಷಕ ಶಿಹಾನ್ ಅಬ್ದುಲ್ ರಹ್ಮಾನ್ ಅವರ ಶಿಷ್ಯಂದಿಯರಿಗೆ ಹಲವು ಪದಕ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!