24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!