23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya
error: Content is protected !!