ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya
error: Content is protected !!