32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲ ಎಂ.ಕೆ ಕೆದ್ದು ಭಾಗವಹಿಸಿ ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನರಂತೆ ಬದುಕುತ್ತಿದ್ದಾರೆ. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದು ಸ್ವಾಭಿಮಾನ ಹಾಗೂ ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ನಿವೃತ್ತ ಶಿಕ್ಷಕಿ ಉಮಾ ಆರ್ ರಾವ್, ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವ ಸಂಘಟಕಿ, ಮಹಿಳಾ ಮಂಡಲಗಳ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಶಾಂತಾ ಬಂಗೇರ ಕಲಾವಿದರೂ, ಲಾಯಿಲ ಗ್ರಾಮ ಪಂಚಾಯತ್ ನ ಸದಸ್ಯೆ ಆಶಾಲತಾ ಪ್ರಶಾಂತ್, ದೆಹಲಿಯ ರಿಪಬ್ಲಿಕ್ ಡೇ ಪೆರೇಡ್ ನಲ್ಲಿ ಭಾಗವಹಿಸಿದ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ರಾಧಿಕಾ ಸಿ. ಎಸ್. ಇವರನ್ನು ಸನ್ಮಾನಿಸಲಾಯಿತು.

ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಸ್ವಾಗತಿಸಿ, ಮಹಿಳಾ ದಿನಾಚರಣೆಯ ಮುಖಾಂತರ ನಡೆದ ಐದು ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.

ವೇದಿಕೆ ಆಹ್ವಾನವನ್ನು ಸದಸ್ಯರಾದ ಸ್ವಾತಿ ಪ್ರೀತೇಶ್, ಸನ್ಮಾನಿತರ ಪರಿಚಯವನ್ನು ಕಾರ್ಯಕ್ರಮದ ಸಂಯೋಜಕರಾದ ಹೇಮಾವತಿ ಕೆ, ಮಧುರ ರಾಘವ್ ವಾಚಿಸಿದರು. ಕಾರ್ಯಕ್ರಮದಲ್ಲಿ ಘಟಕದ ಪೂರ್ವ ಅಧ್ಯಕ್ಷರುಗಳು, ಪದಾಧಿಕಾರಿಗಳು, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Related posts

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು ಸೇರಿ ಮೃತದೇಹ ಹೂತು ಹಾಕಿರುವ ಆರೋಪ ಪ್ರಕರಣ : ಭಾಸ್ಕರ್ ನಾಯ್ಕ್ ರವರಿಂದ ಎಸ್.ಐ.ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!