22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ.

ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಓದುತ್ತಿರುವ ಶರೋನ್ ಹಾಗೂ ಕಳೆಂಜ ಗ್ರಾಮದ ಮಾಣಿಂಗೇರಿ ನಿವಾಸಿ, ನರ್ಸಿಂಗ್ ವಿದ್ಯಾರ್ಥಿ ಸೆಬಾಸ್ಟಿಯನ್ ಅಪಘಾತವಾದ ವಿದ್ಯಾರ್ಥಿಗಳು.

ಎ.05 ರಂದು ಮುಂಜಾನೆ ಬಿ-ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಬಿ.ಸಿ.ರೋಡ್‌ ನಿಂದ ಮಂಗಳೂರು ಕಡೆ ಬೈಕಿನಲ್ಲಿ ಹೋಗುತ್ತಿರುವಾಗ ಘಟನೆ ಸಂಭವಿಸಿದೆ.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ, ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂಬವರ ದೂರಿನಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಭಜನಾ ಸಮಿತಿ ವತಿಯಿಂದ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya
error: Content is protected !!