23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ : ಮದ್ದಡ್ಕ ಹೆಲ್ಪ್ ಲೈನ್ ಮತ್ತು ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪುರುಷರು ಮಾತ್ರವಲ್ಲದೆ ಪ್ರಥಮ ಬಾರಿಗೆ ಮಹಿಳೆಯರಿಗೂ ಕೂಡಾ ಅದ್ದೂರಿಯಾದ ಇಫ್ತಾರ್ ಕೂಟವನ್ನು ನೂರುಲ್‌ ಹುದಾ ಜುಮಾ ಮಸ್ಜಿದ್ ಮದ್ದಡ್ಕ ವಠಾರದಲ್ಲಿ ನಡೆಸಲಾಯಿತು.

ಇಫ್ತಾರ್ ಕೂಟದ ಜೊತೆಗೆ ವಿಶೇಷ ಧಾರ್ಮಿಕ ತರಗತಿ ಮತ್ತು ಸ್ಮಾರ್ಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದಂತಹ ಮದರಸ ವಿದ್ಯಾರ್ಥಿಗಳಿಗೆ ಮತ್ತು ಅವರ ಸಾಧನೆಗೆ ಸ್ಪೂರ್ತಿಯಾದ ಉಸ್ತಾದರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಯಿತು.

ಅದರೊಂದಿಗೆ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಆಮಿನಾರವರ ಸಮಾಜಮುಖಿ ಕೆಲಸ ಕಾರ್ಯಗಳನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮದ್ದಡ್ಕ ಮಸೀದಿಯ ಧರ್ಮಗುರು ಹಸನ್ ಮುಬಾರಕ್ ಸಖಾಫಿ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಮದ್ದಡ್ಕ ಹೆಲ್ಪ್ ಲೈನ್ ಅಧ್ಯಕ್ಷ ಶಾಕಿರ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಸಮಾಜ ಸೇವಕ ಅಬ್ಬೋನು ಮದ್ದಡ್ಕ, ಮಸೀದಿ ಆಡಳಿತ ಸಮಿತಿಯ ಕಾರ್ಯದರ್ಶಿ ಎಮ್ ಸಿರಾಜ್ ಚಿಲಿಂಬಿ, ಸಂಪನ್ಮೂಲ ವ್ಯಕ್ತಿ ಉಮರ್ ಮಾಸ್ಟರ್ ಮಾತನಾಡಿದರು. ಜಮಾಅತಿನ ಹಿರಿಯರಾದ ಉಮರಬ್ಬ ಯು.ಆರ್, ಎಮ್.ಎಚ್ ಅಬೂಬಕ್ಕರ್, ಎಚ್ ಎಮ್‌ ಹಸನಬ್ಬ, ಮದ್ದಡ್ಕ ಹೆಲ್ಪ್ ಲೈನ್ ಉಪಾಧ್ಯಕ್ಷ ಝಹೀರ್ ಮದ್ದಡ್ಕ, ಕೋಶಾಧಿಕಾರಿ ರಫೀಕ್ ಲಿಂಬೆ, ಮಾಜಿ ಅಧ್ಯಕ್ಷ ಝಹೀರ್ ಬಿನಾ ಮತ್ತು ಉಬೈದುಲ್ಲಾ ಯು.ಆರ್, ಕಾರ್ಯಕಾರಿಣಿ ಸದಸ್ಯರಾದ ಸ್ವಾಲಿ ಆಲಂದಿಲ, ಇರ್ಶಾದ್ ಪೊಲೀಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೆಲ್ಪ್‌ಲೈನ್ ಕಾರ್ಯದರ್ಶಿ ಮುಸ್ತಫಾ ಎಚ್,ಎಸ್ ಸ್ವಾಗತಿಸಿದರು. ಸದಸ್ಯ ಅಲ್ತಾಫ್ ನಿರೂಪಿಸಿದರು.

Related posts

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya
error: Content is protected !!