24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ , ಗ್ರಾಮ ಪಂಚಾಯತ್ ಮಾಲಾಡಿ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯದ ಆಶ್ರಯದಲ್ಲಿ ಎ.05 ರಂದು ಮತದಾರರ ಜಾಗೃತಿ ಕಾರ್ಯಕ್ರಮವನ್ನು ದ.ಕ.ಜಿ.ಪ.ಉ. ಹಿ .ಪ್ರಾ ಶಾಲೆ ಮಾಲಾಡಿ ಇಲ್ಲಿ ನಡೆಸಲಾಯಿತು.

ನಂತರ ಮಕ್ಕಳಲ್ಲಿ ತಮ್ಮ ಮನೆಯಲ್ಲಿರುವ ಎಲ್ಲಾ ಮತದಾರರು ಮತ ಹಾಕುವಂತೆ ತಿಳಿಸಲು ಹೇಳಲಾಯಿತು.
ವಿಶೇಷವಾಗಿ ಮಕ್ಕಳು ಅವರವರ ಸ್ನೇಹಿತರ ಮನೆಗೆ ಕಡ್ಡಾಯವಾಗಿ ಮತದಾನ ಮಾಡುವಂತೆ ವಿನಂತಿಸಿ ಪತ್ರ ಬರೆದು ಪೋಸ್ಟ್ ಮಾಡುವಂತೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿಯ ಕಾರ್ಯನಿರ್ವಾಹಕ ಅಧಿಕಾರಿ ವೈಜಣ್ಣ , ತಾ.ಪಂ.ಕಛೇರಿ ಅಧೀಕ್ಷಕ ಪ್ರಶಾಂತ್ ಜೈನ್ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಯೋಗೇಶ್. ಎಚ್.ಆರ್ ಹಾಗೂ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಯಶೋಧರ ಶೆಟ್ಟಿ , ಹಾಗೂ ಶಾಲಾ ಮುಖ್ಯೋಪಾಧ್ಯರು, ಶಿಕ್ಷಕವೃಂದ, ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಜ್ಯೋತಿ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಸರಸ್ವತಿ ಗೋಮಂದಿರ ಲೋಕಾರ್ಪಣೆ: ಅಳಿವಿನಂಚಿನಲ್ಲಿರುವ ದೇಸಿ ಮಲೆನಾಡು ಗಿಡ್ಡ ತಳಿಯ ಗೋವುಗಳನ್ನು ಸಾಕಿ ಬೆಳೆಸುವ ವಿಶಿಷ್ಟ ಯೋಜನೆ :ಕಾಲೇಜು ಕ್ಯಾಂಪಸ್ ನಲ್ಲಿ ಗೋಶಾಲೆ, ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿರವರ 125 ನೇ ಜನ್ಮದಿನಾಚರಣೆ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!