April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ ಗಾಯತ್ರಿ (28) ಎಂಬವರು ಎರಡನೇ ಹೆರಿಗೆಗಾಗಿ ಎ 03 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎ04 ರಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದಾಗ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು ಅದರೆ  ಈ ಬಗ್ಗೆ  ಯಾವುದೇ ಪೊಲೀಸ್  ದೂರು ದಾಖಲಾದ ಬಗ್ಗೆ ಮಾಹಿತಿ ಇಲ್ಲ.

ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು  ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

Related posts

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!