September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ ಗಾಯತ್ರಿ (28) ಎಂಬವರು ಎರಡನೇ ಹೆರಿಗೆಗಾಗಿ ಎ 03 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎ04 ರಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದಾಗ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು ಅದರೆ  ಈ ಬಗ್ಗೆ  ಯಾವುದೇ ಪೊಲೀಸ್  ದೂರು ದಾಖಲಾದ ಬಗ್ಗೆ ಮಾಹಿತಿ ಇಲ್ಲ.

ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು  ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya
error: Content is protected !!