23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ ಗಾಯತ್ರಿ (28) ಎಂಬವರು ಎರಡನೇ ಹೆರಿಗೆಗಾಗಿ ಎ 03 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಎ04 ರಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅದರೆ ಹೆರಿಗೆ ನಂತರ ವಿಪರೀತ ರಕ್ತ ಸ್ರಾವ ಉಂಟಾಗಿದ್ದು ರಾತ್ರಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.


ಇದರಿಂದ ಕುಟುಂಬಸ್ಥರು ಆಕ್ರೋಶಗೊಂಡರಲ್ಲದೇ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದಾಗ ಕೆಲ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು ಅದರೆ  ಈ ಬಗ್ಗೆ  ಯಾವುದೇ ಪೊಲೀಸ್  ದೂರು ದಾಖಲಾದ ಬಗ್ಗೆ ಮಾಹಿತಿ ಇಲ್ಲ.

ಮೃತ ಮಹಿಳೆಗೆ  3 ವರ್ಷದ ಹೆಣ್ಣು ಮಗುವೊಂದಿದ್ದು  ಇಬ್ಬರು ಪುಟ್ಟ ಮಕ್ಕಳು ತಾಯಿಯನ್ನು ಕಳೆದುಕೊಂಡಂತಾಗಿದೆ.

Related posts

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಮತದಾನ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya
error: Content is protected !!