25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!