23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
error: Content is protected !!