ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಕೆ ಹರಿಪ್ರಸಾದ್ ರವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ಅಭಿನಂದನೆ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಗೌರವಾರ್ಪಣೆ : 3ನೇ ವರ್ಷದ ಶ್ರೀ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!