25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ ವೃಂದ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಸ್ತಿ ವಿಜೇತ ಜನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಶೃಂಗೇರಿ ಏಕತಾರಿ ಹಾಡುಗಾರರಾದ ನಾದ ಮಣಿನಾಲ್ಕೂರು, ಮಂಗಳೂರು ಚಿತ್ರಕಲಾವಿದ ತಾರಾನಾಥ್ ಕೈರಂಗಳ, ಬೆಳ್ತಂಗಡಿ ಸ್ಪೂರ್ತಿ ಯಕ್ಷಿಣಿ ಲೋಕ ರಾಜೀವ್ ಬಿ.ಹೆಚ್, ಉಜಿರೆ ಶಿಕ್ಷಕರು ಅನ್ನಪೂರ್ಣ ಭಟ್, ವಲಯ ತರಬೇತುದಾರರು ಜೆಸಿ ಹೇಮಾವತಿ.ಕೆ, ಬೆಳ್ತಂಗಡಿ ರಂಗಭೂಮಿ ಕಲಾವಿದ ಜೇಸಿಐ ಇಂಡಿಯಾ ಪ್ರಶಾಂತ್ ಬೆಳ್ತಂಗಡಿ ಭಾಗವಹಿಸಲಿದ್ದಾರೆ.

ಶಿಬಿರದಲ್ಲಿ ಮನೋರಂಜನಾ ಆಟಗಳು, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ, ವರ್ಲಿ ಚಿತ್ರಕಲೆ, ಕೊಲಾಜ್ ಮ್ಯಾಜಿಕ್ ಶೋ ಮತ್ತು ತರಬೇತಿ, ಕ್ರಾಫ್ಟ್, ಗ್ರೀಟಿಂಗ್ ಕಾರ್ಡ್, ಗೂಡು ದೀಪ ತಯಾರಿ, ಹಾಡು, ಅಭಿನಯ ಮತ್ತು ಹೊರಾಂಗಣ ಪರಿಸರ ಚಟುವಟಿಕೆಗಳು ಇರಲಿದೆ.

ಶಿಬಿರದಲ್ಲಿ ಊಟ ಉಪಾಹಾರದ ವ್ಯವಸ್ಥೆ ಇರುತ್ತದೆ ಎಂದು ಮಹಿಳಾ ವೃಂದದ ಅಧ್ಯಕ್ಷೆ ಆಶಾ ಸತೀಶ್ ತಿಳಿಸಿದ್ದಾರೆ.

Related posts

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!