22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು, ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಎ.05 ರಂದು ನಡೆದಿದೆ.

ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಎಂಬವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ಓದುತ್ತಿರುವ ಶರೋನ್ ಹಾಗೂ ಕಳೆಂಜ ಗ್ರಾಮದ ಮಾಣಿಂಗೇರಿ ನಿವಾಸಿ, ನರ್ಸಿಂಗ್ ವಿದ್ಯಾರ್ಥಿ ಸೆಬಾಸ್ಟಿಯನ್ ಅಪಘಾತವಾದ ವಿದ್ಯಾರ್ಥಿಗಳು.

ಎ.05 ರಂದು ಮುಂಜಾನೆ ಬಿ-ಮೂಡ ಗ್ರಾಮದ ಕೈಕಂಬ ಎಂಬಲ್ಲಿ ಬಿ.ಸಿ.ರೋಡ್‌ ನಿಂದ ಮಂಗಳೂರು ಕಡೆ ಬೈಕಿನಲ್ಲಿ ಹೋಗುತ್ತಿರುವಾಗ ಘಟನೆ ಸಂಭವಿಸಿದೆ.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ, ಮಂಗಳೂರು ಯುನಿಟಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಬಂಟ್ವಾಳ ನಿವಾಸಿ ಅಬ್ದುಲ್ ಸಮದ್ ಎಂಬವರ ದೂರಿನಂತೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya
error: Content is protected !!