ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ.25 ಮತ್ತು 26 ರಂದು ನಡೆಯುವ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ, ಹಾಗೂ ದೈವಗಳ ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆಯನ್ನು ಮಾಜಿ ಪಂಚಾಯತ್ ಸದಸ್ಯರಾದ ಮಂಜುನಾಥ ಗುಡಿಗಾರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಕೂಟದಕಲ್ಲು ವಾರ್ಡ್ ನ ನೂತನ ಅಧ್ಯಕ್ಷರಾದ ಪ್ರಭಾಕರ ಗೌಡ ಮತ್ತು ಕೂಟದಕಲ್ಲು ವಾರ್ಡ್ ನ ಮಾಜಿ ಅಧ್ಯಕ್ಷರಾದ ಸುಂದರ ಗೌಡ ಮತ್ತು ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇದರ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ರಮೇಶ್ ಗುಡಿಗಾರ್ ಮತ್ತು ಕಾರ್ಯದರ್ಶಿ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು.

Leave a Comment

error: Content is protected !!