25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರೋಪ ದಿನದ ಶಿಬಿರದಲ್ಲಿ ಕಥೆ, ಕವನ ಮತ್ತು ವರದಿಗಾರಿಕೆ ಬಗ್ಗೆ ಬರವಣಿಗೆ ಕಮ್ಮಟ ಹಾಗೂ ಮಿಮಿಕ್ರಿ, ಜಾನಪದ ಗೀತೆಗಳ ಗಾಯನ ಪ್ರಾತ್ಯಕ್ಷಿಕೆ, ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಪೂಜ, ಪೂರ್ಣಶ್ರೀ, ಲಿಖಿತ ಮತ್ತು ಪ್ರಸಾದ್ ಶೆಟ್ಟಿ ಮುಂಡಾಜೆ ಇವರು ಆಗಮಿಸಿದ್ದರು.

ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಸುಮನ್ ಯು ಎಸ್, ಶ್ರೀಮತಿ ಕೋಕಿಲ ಮತ್ತು ಶ್ರೀಮತಿ ಚಿತ್ರಾ ರವರು ಉಪಸ್ಥಿತರಿದ್ದರು.
ಮಕ್ಕಳಿಂದಲೆ ಕಾರ್ಯಕ್ರಮವು ಪೂರ್ಣವಾಗಿ ಸಂಯೋಜಿಸಲ್ಪಟ್ಟಿತು.

Related posts

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!