April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

ಬೆಳ್ತಂಗಡಿ: ಮಹಿಳಾ ದಿನಾಚರಣೆಯ ಪ್ರಯುಕ್ತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ” ಶುಶ್ರೂಷ ” ಎಂಬ ಕಾರ್ಯಕ್ರಮವನ್ನು ಬೀಟ್ ರಾಕರ್ಸ್ ಡಾನ್ಸ್ ಆಕಾಡೆಮಿಯ ಮಾಲಕರಾದ ಜಿತೇಶ್ ಇವರ ನಿವಾಸದಲ್ಲಿ ಹಮ್ಮಿಕೊಳ್ಳಲಾಯಿತು.

ಸಾಮಾನ್ಯ ಕಾಯಿಲೆಗಳಿಗೆ ಮನೆಮದ್ದುಗಳು, ಹಾಗೂ ದೈಹಿಕ ಮಾನಸಿಕ ಆರೋಗ್ಯವನ್ನು ಕಾಪಾಡುವ ಬಗ್ಗೆ ವಲಯ ತರಬೇತಿದಾರರು ಹಾಗೂ ಬೆಳ್ತಂಗಡಿಯ ಶುಶ್ರೂಷನಾಧಿಕಾರಿ ಶುಭಾಷಿಣಿ ಇವರು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಜೆಸಿ ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ವಹಿಸಿದ್ದರು.

ವೇದಿಕೆಯಲ್ಲಿ ಜಿತೇಶ್ ರವರ ಮಾತೃಶ್ರೀ ರೇವತಿ ಅತಿಥಿಯಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ವೇದಿಕೆ ಆಹ್ವಾನವನ್ನು ಜೂನಿಯರ್ ಘಟಕದ ನಿರ್ದೇಶಕರಾಗಿರುವ ರಕ್ಷಿತಾ ಶೆಟ್ಟಿ ಹಾಗೂ ಜೆಸಿವಾಣಿಯನ್ನು ಸ್ವಾತಿ ಪ್ರೀತೇಶ್ ಉದ್ಘೋಷಿಸಿದರು.

ಕಾರ್ಯಕ್ರಮದಲ್ಲಿ ಜೆಸಿ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಕುಟುಂಬೋತ್ಸವವನ್ನು ಆಚರಿಸಲಾಯಿತು. ಜೂನಿಯರ್ ಜೆಸಿ ವಿಭಾಗದ ನಿರ್ದೇಶಕರಾದ ಸಚಿನ್ ಸಾಲಿಯಾನ್ ಗೇರುಕಟ್ಟೆ ಇವರು ಕಾರ್ಯಕ್ರಮ ನಡೆಸಿಕೊಟ್ಟರು.

ಮಂಜುಶ್ರೀ ಜೆಸಿಐ ಘಟಕದಿಂದ ಕುಟುಂಬೋತ್ಸವವನ್ನು ಆಯೋಜಿಸಿದ ಜಿತೇಶ್ ಇವರ ಮಾತೃಶ್ರೀ ಅವರನ್ನು ಗೌರವಿಸಲಾಯಿತು. ಕಾರ್ಯದರ್ಶಿ ಅನುದೀಪ್ ಜೈನ್ ಇವರು ಧನ್ಯವಾದ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ರಾವ್, ಮಹಿಳಾ ಜೆಸಿ ಸಂಯೋಜಕರಾದ ಶ್ರುತಿರಂಜಿತ್, ಜೆಜೆಸಿ ಘಟಕದ ಅಧ್ಯಕ್ಷ ಸಮನ್ವತ್ ಕುಮಾರ್, ಘಟಕದ ಪೂರ್ವ ಅಧ್ಯಕ್ಷರು, ಮಹಿಳಾ ಜೆಸಿಯ ಪೂರ್ವ ಅಧ್ಯಕ್ಷರುಗಳು, ಘಟಕದ ಪದಾಧಿಕಾರಿಗಳು ಸದಸ್ಯರುಗಳು ಹಾಗೂ ಜೆಜೆಸಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ ನಿಂದ ಬೆಂಬಲ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!