ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರೋಪ ದಿನದ ಶಿಬಿರದಲ್ಲಿ ಕಥೆ, ಕವನ ಮತ್ತು ವರದಿಗಾರಿಕೆ ಬಗ್ಗೆ ಬರವಣಿಗೆ ಕಮ್ಮಟ ಹಾಗೂ ಮಿಮಿಕ್ರಿ, ಜಾನಪದ ಗೀತೆಗಳ ಗಾಯನ ಪ್ರಾತ್ಯಕ್ಷಿಕೆ, ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಪೂಜ, ಪೂರ್ಣಶ್ರೀ, ಲಿಖಿತ ಮತ್ತು ಪ್ರಸಾದ್ ಶೆಟ್ಟಿ ಮುಂಡಾಜೆ ಇವರು ಆಗಮಿಸಿದ್ದರು.

ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಸುಮನ್ ಯು ಎಸ್, ಶ್ರೀಮತಿ ಕೋಕಿಲ ಮತ್ತು ಶ್ರೀಮತಿ ಚಿತ್ರಾ ರವರು ಉಪಸ್ಥಿತರಿದ್ದರು.
ಮಕ್ಕಳಿಂದಲೆ ಕಾರ್ಯಕ್ರಮವು ಪೂರ್ಣವಾಗಿ ಸಂಯೋಜಿಸಲ್ಪಟ್ಟಿತು.

Leave a Comment

error: Content is protected !!