September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕಳೆದ ಏಳು ದಿನಗಳಿಂದ ನಡೆಯುತ್ತಿದ್ದ ಬೇಸಿಗೆ ಶಿಬಿರವು ಸಮಾರೋಪಗೊಂಡಿತು. ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸಮಾರೋಪ ದಿನದ ಶಿಬಿರದಲ್ಲಿ ಕಥೆ, ಕವನ ಮತ್ತು ವರದಿಗಾರಿಕೆ ಬಗ್ಗೆ ಬರವಣಿಗೆ ಕಮ್ಮಟ ಹಾಗೂ ಮಿಮಿಕ್ರಿ, ಜಾನಪದ ಗೀತೆಗಳ ಗಾಯನ ಪ್ರಾತ್ಯಕ್ಷಿಕೆ, ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಾದ ಪೂಜ, ಪೂರ್ಣಶ್ರೀ, ಲಿಖಿತ ಮತ್ತು ಪ್ರಸಾದ್ ಶೆಟ್ಟಿ ಮುಂಡಾಜೆ ಇವರು ಆಗಮಿಸಿದ್ದರು.

ವೇದಿಕೆಯಲ್ಲಿ ಶಿಕ್ಷಕರಾದ ಕೃಷ್ಣಾನಂದ, ಸುಮನ್ ಯು ಎಸ್, ಶ್ರೀಮತಿ ಕೋಕಿಲ ಮತ್ತು ಶ್ರೀಮತಿ ಚಿತ್ರಾ ರವರು ಉಪಸ್ಥಿತರಿದ್ದರು.
ಮಕ್ಕಳಿಂದಲೆ ಕಾರ್ಯಕ್ರಮವು ಪೂರ್ಣವಾಗಿ ಸಂಯೋಜಿಸಲ್ಪಟ್ಟಿತು.

Related posts

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!